ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Wednesday, March 30, 2011

ಹರಿ ಚಿತ್ತ ಸತ್ಯ ನಮ್ಮ ಹರಿ ಚಿತ್ತ ಸತ್ಯ

ಹರಿ ಚಿತ್ತ ಸತ್ಯ ನಮ್ಮ ಹರಿ ಚಿತ್ತ ಸತ್ಯ
ನರ ಚಿತ್ತಕೆ ಬಂದದ್ದು ಲವಲೇಶ ನಡೆಯದು

ಸುದತಿ ಮಕ್ಕಳ ಭಾಗ್ಯ ಬಯಸೋದು ನರ ಚಿತ್ತ
ಮದುವ್ಯಾಗದಿರುವುದು ಹರಿ ಚಿತ್ತವಯ್ಯ

ಕುದುರೆ ಅಂದಣ ಆನೆ ಬಯಸೋದು ನರ ಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ

ಸದಾ ಅನ್ನದಾನವ ಬಯಸೋದು ನರ ಚಿತ್ತ
ಉದರಕೆ ಅಳುವುದು ಹರಿ ಚಿತ್ತವಯ್ಯ

ಪುರಂದರ ವಿಠ್ಠಲನ ಬಯಸೋದು ನರ ಚಿತ್ತ
ದುರಿತವ ಕಳೆವುದು ಹರಿ ಚಿತ್ತವಯ್ಯ

No comments:

Post a Comment