ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Saturday, April 30, 2011

ಜಿ. ಪಿ. ರಾಜರತ್ನಂ

'ಜಿ. ಪಿ. ರಾಜರತ್ನಂ' ರವರು ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೪ರಂದು ಜನಿಸಿದರು. ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ (೧೯೩೧ರಲ್ಲಿ) ರಾಜರತ್ನಂ ಎಂ. ಎ (ಕನ್ನಡ) ದಲ್ಲಿ ಮುಗಿಸಿ, ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `ತುತ್ತೂರಿ' ಶಿಶು ಗೀತೆ ಸಂಕಲನ'. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.

ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ ಲಲಿತಮ್ಮ ಕಾಯಿಲೆ ಬಿದ್ದವರು ಉತ್ತಮವಾಗಲೇ ಇಲ್ಲ. ವಿಧಿವಶರಾದರು. ಅವರ ನೆನಪು ಹಸಿರಾಗಿದ್ದಾಗಲೇ ಸೀತಮ್ಮ ಅವರ 'ಬಾಳನಂದಾದೀಪ'ವಾಗಿ ಬಂದರು. ಬದುಕು ಸ್ಥಿರವಾಯಿತು. ಕಷ್ಟ ಕಾರ್ಪಣ್ಯಗಳ ನಡುವೆ ೧೯೩೮ರಲ್ಲಿ 'ಕನ್ನಡ ಪಂಡಿತ ಹುದ್ದೆ', ರಾಜರತ್ನಂ ಅವರನ್ನು ಹುಡುಕಿ ಬಂತು. ಮೈಸೂರು, ಬೆಂಗಳೂರು, ಶಿವಮೊಗ್ಗ, ತುಮಕೂರುಗಳಲ್ಲಿ ಅಧ್ಯಾಪಕರಾಗಿ, ಮೆಚ್ಚಿನ ಮೇಸ್ಟ್ರು ಆಗಿ ಖ್ಯಾತರಾದರು

"ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. 'ಕುಡುಕ'ನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ. 'ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ' ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ ಕನ್ನಡ ಕಾಯ್ದ, ಬೋಧಿಸಿದ `ಮೇಷ್ಟ್ರು' ಆಗಿ ಹೆಸರಾದವರು ಜಿ.ಪಿ.ರಾಜರತ್ನಂ ಅವರು. ಟಿ. ಪಿ.ಕೈಲಾಸಂ ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು.

No comments:

Post a Comment