ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Thursday, June 23, 2011

ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು

ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ?
ನಿನ್ನ ಸೌಜನ್ಯವೇ ದಾರಿನೆರಳಾಗಿರಲು
ನಿತ್ಯಸುಖಿ ನೀನೆನಲು ಒಪ್ಪೇನೆ?

ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿಸೂಸುವ ಅಮೃತ ನೀನೇನೆ!
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ!

ನಿನ್ನ ಕಿರುನಗೆಯಿಂದ, ನಗೆಯಿಂದ, ನುಡಿಯಿಂದ
ಎತ್ತರದ ಮನೆ ನನ್ನ ಬದುಕೇನೆ!
ಚಂದ್ರನಲಿ ಚಿತ್ರಿಸಿದ ಚೆಲುವಿನೊಳಗುಡಿಯಿಂದ
ಗಂಗೆ ಬಂದಳು ಇದ್ದ ಕಡೆಗೇನೆ!

- ಕೆ.ಎಸ್. ನರಸಿಂಹಸ್ವಾಮಿ

"ಅನಿರೀಕ್ಷಿತ"(1970) ಎನ್ನುವ ಚಲನಚಿತ್ರದಲ್ಲಿ ವಿಜಯಭಾಸ್ಕರ್ ಸಂಗೀತದಲಿ, ಪಿ.ಬಿ. ಶ್ರೀನಿವಾಸ್ ಅವರು ತುಂಬ ಸೊಗಸಾಗಿ ಹಾಡಿದ್ದಾರೆ.
ಹಾಗೆ ಸಿ. ಅಶ್ವಥ್ ಅವರು ಕೂಡ ತಮ್ಮದೇ ಧಾಟಿಯಲ್ಲಿ ಈ ಕವನವನ್ನು ತುಂಬ ಸೊಗಸಾಗಿ ಹಾಡಿದ್ದಾರೆ.

No comments:

Post a Comment