ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Thursday, July 14, 2011

ಇರುಳ ಸಮಯ

ಇರುಳ ಸಮಯ ಸುರಿಮಳೆಯೊಳಗೆ
ದೋಣಿಗಳಿಳಿದಿವೆ ಹೊಳೆಯೊಳಗೆ

ಶ್ಯಾಮಲ ಸಾಗರವೇ ಗುರಿಯೆನ್ನುತ
ಸಾಗಿವೆ ಸಾವಿರ ದೋಣಿಗಳು |
ಸೆರಗೇ ಹಾಯಿ ! ಹೃದಯವೆ ಹುಟ್ಟು !
ದೋಣಿ ಹಿಂದೆ ಜಲವೇಣಿಗಳು ||

ಏರಿಳಿಯುವ ಅಲೆ! ಮುಂದೆ ಇದಿರು ಹೊಳೆ !
ಜಗ್ಗುವುವೇ ಈ ಹಾಯಿಗಳು ?
ಎದೆಯನೆ ಸೀಳುವ ಹೋಳು ಬಂಡೆಗಳು
ಆ ಎನ್ನುವ ಸುಳಿಬಾಯಿಗಳು ||

ಮುಳುಗಿಸೊ ಅಥವಾ ತೇಲಿಸೊ ರಥವ
ಧೃತಿಯೊಂದೇ ಗತಿ ಹಾಡುತಿವೆ |
ಮುಳುಗುವ ಹೊರತೂ ತೇಲದು ದೋಣಿ
ಹಾಯಿ ವಿದಾಯವ ಹೇಳುತಿವೆ ||

-ಹೆಚ್. ಎಸ್. ವೆಂಕವೇಶಮೂರ್ತಿ

No comments:

Post a Comment