ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Monday, October 7, 2013

ತಳುಕಿನ ವೆ೦ಕಣ್ಣಯ್ಯ

ತಳುಕಿನ ವೆ೦ಕಣ್ಣಯ್ಯ (1885-1936)
ಅವರು ಕನ್ನಡ ಸಾಹಿತ್ಯ ಲೋಕದ ಆದ್ಯ ಪ್ರವರ್ತಕರಲ್ಲಿ ಒಬ್ಬರು.  ಇವರನ್ನು ಆಧುನಿಕ ಕನ್ನಡ ಸಾಹಿತ್ಯದ ಅಶ್ವಿನಿಕುಮಾರರೆಂದು ಕರೆಯಲಾಗುತ್ತದೆ. ಇವರು ಪ್ರಾರಂಭಿಸಿದ ಕನ್ನಡ ಎಂ.ಎ. ತರಗತಿಯ ಪ್ರಥಮ ಬ್ಯಾಚಿನಲ್ಲಿದ್ದವರುಗಳಲ್ಲಿ ಒಬ್ಬರು ಕುವೆಂಪುರವರು. ಪುಟ್ಟಪ್ಪನವರು ತಮ್ಮ ಗುರುಗಳನ್ನು ದೇವರೆಂದೇ ತಿಳಿದಿದ್ದರಂತೆ.  ನೋಡಲು ಎತ್ತರದ ಆಳು, ಟಿ.ಎಸ್.ವಿಯವರು. ಬಿ.ಎ. ಮುಗಿಸಿದ ತರುವಾಯ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಕನ್ನಡ ವಿಷಯದಲ್ಲಿ ಎಂ.ಎ. ಮಾಡಿ ಮುಂದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ತಮ್ಮ ಶಿಷ್ಯರೆಲ್ಲರನ್ನೂ ತಮ್ಮ ಮಕ್ಕಳಂತೆ ಕಂಡು, ಕೈಲಾಗದವರಿಗೆ ಊಟ ವಸತಿಗಳನ್ನೂ ಕೊಟ್ಟು ಪಾಠ ಹೇಳಿಕೊಟ್ಟರು. ಕನ್ನಡ ಎಂ.ಎ.ನ ಮೊದಲನೆಯ ಬ್ಯಾಚಿನಲ್ಲಿ ಕುವೆ೦ಪು  ಸೇರಿದಂತೆ ಹಲವರಿದ್ದರು. ಎಲ್ಲರನ್ನೂ ತಮ್ಮ ಮನೆಗೆ ಕರೆದೊಯ್ದು ಊಟ ಹಾಕಿ, ಪಾಠ ಹೇಳಿಕೊಟ್ಟವರು. ಅವರಂತೆಯೇ ಅಷ್ಟೇ ಎತ್ತರಕ್ಕೇರಿದವರು ಅವರ ತಮ್ಮಂದಿರಲ್ಲೊಬ್ಬರಾದ ತ.ಸು.ಶಾಮರಾಯರು. ಅವರಲ್ಲೂ ಇದೇ ಗುಣವನ್ನು ಕಂಡು, ಅವರ ಶಿಷ್ಯರಾಗಿದ್ದ ಜಿ.ಎಸ್.ಶಿವರುದ್ರಪ್ಪ ನವರು ಅವರ ಬಗ್ಗೆ ಒಂದು ಕವನವನ್ನೇ ರಚಿಸಿದ್ದರು. ಅದು ಬಹಳ ಜನಪ್ರಿಯವೂ ಹೌದು. ಅದೇ - ಎದೆ ತುಂಬಿ ಹಾಡಿದೆನು ಅಂದು ನಾನು ...   ಕುವೆ೦ಪು ಅವರಿಗೂ ಗುರುಗಳಾಗಿದ್ದ ವೆ೦ಕಣ್ಣಯ್ಯ ನವರು ಕನ್ನಡ ಸಾಹಿತ್ಯ ಲೋಕದ ದಿಗ್ಗಜರಲ್ಲಿ ಒಬ್ಬರು.

ವೆ೦ಕಣ್ಣಯ್ಯನವರ ಮನೆಯಲ್ಲಿ ನಿತ್ಯ ಸಾಹಿತ್ಯ ದಾಸೋಹ. ಅಲ್ಲಿ ಪ್ರತಿನಿತ್ಯ ಸಾಹಿತ್ಯ ಗೋಷ್ಠಿ ನಡೆಯುತ್ತಿತ್ತು. ಅದರಲ್ಲಿ ಪಾಲ್ಗೊಳ್ಳುತ್ತಿದ್ದವರಲ್ಲಿ ಬಿ.ಎಂ.ಶ್ರೀ, ತೀನ೦ ಶ್ರೀ  ಎ.ಆರ್.ಕೃ ಮುಂತಾದವರನ್ನು ಹೆಸರಿಸಬಹುದು.ಡಿ.ವಿ.ಗು೦ಡಪ್ಪ  ನವರು ಮಂಕುತಿಮ್ಮನ ಕಗ್ಗದ ಮುಖಪುಟದಲ್ಲಿ ಟಿ.ಎಸ್.ವಿ, ಎ.ಆರ್.ಕೃ ಮತ್ತು ಮೋಕ್ಷಗುಂಡಂ ಕೃಷ್ಣಮೂರ್ತಿಗಳನ್ನು  (ಮೋಕ್ಷ ಗು೦ಡ೦ ವಿಶ್ವೇಶ್ವರಯ್ಯ ನವರ ಸಾಕು ಮಗ) ಮೂವರು ಮೇರು ಪರ್ವಗಳೆಂದು ಹೆಸರಿಸಿದ್ದಾರೆ. ತಮ್ಮ ಮನೆಯಲ್ಲಿ ನಡೆಯುತ್ತಿದ್ದ ಸಾಹಿತ್ಯ ಗೋಷ್ಠಿಯಲ್ಲಿ ಟಿ.ಎಸ್.ವಿ.ಯವರು ಎಷ್ಟರ ಮಟ್ಟಿಗೆ ತಲ್ಲೀನರಾಗುತ್ತಿದ್ದರೆಂದರೆ, ಒಮ್ಮೆ ಅವರ ನವಜಾತ ಕೂಸು ಮರಣ ಹೊಂದಿ ಮನೆಯವರೆಲ್ಲರೂ ಗೊಳೋ ಎಂದು ಅಳುತ್ತಿದ್ದರೆ, ಒಳಗೆ ಹೋಗಿ ಮತ್ತೆ ಬಂದು ಸಾಹಿತ್ಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರಂತೆ. ಅದಕ್ಕೆ ಅಲ್ಲಿದ್ದ ಒಬ್ಬರು ‍ಯಾರೋ ಹೇಳಿದ್ದರಂತೆ, 'ಒಳಗೆ ಅಳುತ್ತಿದ್ದಾರೆ, ಏನೋ ಅಚಾತುರ್ಯವಾಗಿದೆ, ನೀವು ನೋಡುವುದಿಲ್ಲವೇ'. ಅದಕ್ಕಿವರು ಎಲ್ಲ ದೈವನಿಯಾಮಕ - ನಡೆಯುವುದೆಲ್ಲವೂ ನಡೆಯುತ್ತಲೇ ಇರುತ್ತದೆ ಎಂದಿದ್ದರಂತೆ. ಎಂದಿಗೂ ಹೆಚ್ಚಿನ ಸಂತೋಷ ಅಥವಾ ದು:ಖ ವ್ಯಕ್ತಪಡಿಸದ ಸ್ಥಿತಪ್ರಜ್ಞ  ವ್ಯಕ್ತಿತ್ವ ಅವರದ್ದು.  ಎತ್ತರದ ಆಳ್ತನ ಹೊ೦ದಿದ್ದ ವೆ೦ಕಣ್ಣಯ್ಯನವರ ಬಳಿ ತಮಾಷೆಯಾಗಿ ಕೈಲಾಸ೦ ಅವರು ಹೀಗೆ ಹೇಳುತ್ತಿದ್ದರ೦ತೆ - ಸಾರ್ ಅಲ್ಲೇ ಮೇಲೆ ಸ್ವರ್ಗದಲ್ಲಿ ನನ್ನ ಪೂರ್ವಜರು ಕ್ಷೇಮವೇ ಸ್ವಲ್ಪ ನೋಡಿಬಿಡಿ',

ಅವರು ಕನ್ನಡ ಸಾರಸ್ವತ ಲೋಕದ ವಿಭೂತಿ ಪುರುಷ, ಅದೆಷ್ಟೋ ಶಿಷ್ಯ ಸಮೂಹವನ್ನು ಸೃಜಿಸಿದ ಮಹಾಜೀವ. ಅವರು ಕನ್ನಡದ ಉದ್ದಾಮ ಸಾಹಿತಿಗಳ ಗುರುಗಳು. ಪ್ರಾತಃ ಸ್ಮರಣೀಯರು. 
Krupe:  http://nirpars.blogspot.com/2011/08/blog-post.html 

No comments:

Post a Comment